AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚತುಷ್ಪತ ರಸ್ತೆ ಶೀಘ್ರವೇ ಚಾಲನೆ #avintvcom

1 min read
Featured Video Play Icon

ಶ್ರೀರಂಗಪಟ್ಟಣ-ಕುಶಾಲನಗರ; ಚತುಷ್ಪಥ ರಸ್ತೆ ಕಾಮಗಾರಿಗೆ 15 ತಿಂಗಳಲ್ಲಿ ಚಾಲನೆ: ಪ್ರತಾಪ್ ಸಿಂಹ ಕೊಡಗು: ಶ್ರೀರಂಗಪಟ್ಟಣ ಮತ್ತು ಕುಶಾಲನಗರ ಮಾರ್ಗದ ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯು 15 ತಿಂಗಳಲ್ಲಿ ಆರಂಭವಾಗಲಿದೆ ಎಂದು ಕೊಡಗು-ಮೈಸೂರು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಸಭಾಗಂಣದಲ್ಲಿ ಬುಧವಾರ ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೈಸೂರು-ಮಡಿಕೇರಿ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಸಾರ್ವಜನಿಕರ ಅನುಕೂಲಕ್ಕೆ ಚತುಷ್ಪಥ ರಸ್ತೆ ನಿರ್ಮಾಣ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ಶ್ರೀರಂಗಪಟ್ಟಣದಿಂದ ಕುಶಾಲನಗರದಲ್ಲಿ ವರೆಗೆ ರಸ್ತೆ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪ್ರತಾಪ್ ಸಿಂಹ ಅವರು ಹೇಳಿದರು. ಕುಶಾಲನಗರದಲ್ಲಿ ಹೊಸ ಕೈಗಾರಿಕಾ ಪ್ರದೇಶ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮುಂದಾಗಬೇಕು. ಹಾಗೆಯೇ ಕುಶಾಲನಗರದ 25 ಅಥವಾ 50 ಹಾಸಿಗೆಯ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಂಸದರು ಸಲಹೆ ಮಾಡಿದರು. ಈಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ಸರಿಪಡಿಸಬೇಕು. ತಡೆಗೋಡೆ ನಿರ್ಮಾಣ ಮಾಡಬೇಕು. ಜೊತೆಗೆ ಕುಶಾಲನಗರದ ತಾವರೆಕೆರೆ ಪ್ರತಿವರ್ಷ ಮಳೆಗಾಲದ ಅವಧಿಯಲ್ಲಿ ರಸ್ತೆ ಸಂಪರ್ಕ ವ್ಯತ್ಯಯ ಉಂಟಾಗುತ್ತಿದ್ದು, ರಸ್ತೆಯನ್ನು ಎತ್ತರಿಸುವಂತೆ ಪ್ರತಾಪ್ ಸಿಂಹ ಅವರು ಸೂಚಿಸಿದರು. www.avintv.com

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author