AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ರೈತನ ಸಾಧನೆಗೆ ಕೃಷಿ ಸಚಿವರ ಮೆಚ್ಚುಗೆ.ತಪ್ಪದೇ ವೀಕ್ಷಿಸಿ.#avintvcom

1 min read
Featured Video Play Icon

ಬಸರಕೋಡ “ರೈತರೊಂದಿಗೆ ಒಂದು ದಿನ” ಇಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದ ಪ್ರಗತಿಪರ ರೈತ ಶ್ರೀ ಪವಾಡಪ್ಪ ವಡ್ಡರ್ ಅವರ ಕೃಷಿ ಜಮೀನಿಗೆ, ಕೃಷಿ ಸಚಿವರಾದ ಶ್ರೀ ಬಿ.ಸಿ‌.ಪಾಟೀಲ್ ಜಿ ಅವರೊಂದಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೇಟಿ ನೀಡಿ, ಅವರ ಕೃಷಿ ಚಟುವಟಿಕೆಗಳನ್ನು ವೀಕ್ಷಿಸಿದರು. ಮೂರು ಎಕರೆ ಜಮೀನಿನಲ್ಲಿ ಈ ರೈತ ಕುರಿ, ಕೋಳಿ ಸಾಕಾಣಿಕೆ ಹಾಗೂ ವಿವಿಧ ತರಕಾರಿ ಮತ್ತು ಹಣ್ಣುಗಳನ್ನು ಬೆಳೆಯುತ್ತಿದ್ದು, ವರ್ಷಕ್ಕೆ ಲಕ್ಷಾಂತರ ಆದಾಯ ಗಳಿಸುತ್ತಿದ್ದಾರೆ. ಮನಸ್ಸಿದ್ದರೆ ಮಾರ್ಗ ಎಂಬಂತೆ, ತಮ್ಮಲ್ಲಿರುವ ಅಲ್ಪ ಜಮೀನಿನಲ್ಲಿ ಉತ್ತಮ ಇಳುವರಿ ಪಡೆಯುತ್ತಿರುವ ಇವರ ಕೃಷಿ ಕಾರ್ಯ ಸರ್ವ ಅನ್ನದಾತರಿಗೆ ಮಾದರಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎ.ಎಸ್. ಪಾಟೀಲ ನಡಹಳ್ಳಿ ,ಜಿಲ್ಲಾಧಿಕಾರಿಗಳಾದ ಶ್ರೀ ಪಿ. ಸುನಿಲಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ರಾಜಶೇಖರ ವಿಲಿಯಮ್ಸ್, ಜಿ. ಪಂ. ಸದಸ್ಯರು, ತಾ.ಪಂ. ಸದಸ್ಯರು, ರೈತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. www.avintv.com ಅನುಭವಿ ಸುದ್ದಿ ವರದಿಗಾರರು ಬೇಕಾಗಿದ್ದಾರೆ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author