ಸೇತುವೆ ನಿರ್ಮಾಣ ಕಾಮಗಾರಿಗೆ ಶಶಿಕಲಾ ಜೊಲ್ಲೆ ಜಿ, ಯವರು ಚಾಲನೆ ನೀಡಿದರು.ತಪ್ಪದೇ ವೀಕ್ಷಿಸಿ. #avintvcom
1 min read
ಭಿಮಾಪೂರವಾಡಿ ಜನರ ಬೇಡಿಕೆಗಳನ್ನು ಈಡೇರಿಸಲು ಸತತ ಶ್ರಮ ನಿಪ್ಪಾಣಿ ಮತಕ್ಷೇತ್ರದ ಭಿಮಾಪೂರವಾಡಿ ಹಾಗೂ ಗಳತಗಾ ಗ್ರಾಮಗಳ ನಡುವೆ ಕೊಂಡಾರ ಹಳ್ಳಕ್ಕೆ ಅಡ್ಡಲಾಗಿ, ಸಣ್ಣ ನೀರಾವರಿ ಇಲಾಖೆ ವತಿಯಿಂದ ಮಂಜೂರಾದ 1.20 ಕೋಟಿ ರೂ. ಮೊತ್ತದಲ್ಲಿ, ಸೇತುವೆ ನಿರ್ಮಾಣ ಕಾಮಗಾರಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಯವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಭಾಗದಲ್ಲಿ ಸೇತುವೆ ಇಲ್ಲದೇ, ಮಳೆಗಾಲದಲ್ಲಿ ಜನರು ಸಂಕಷ್ಟ ಅನುಭವಿಸುತ್ತಿದ್ದರು. ಇದನ್ನು ಮನಗಂಡು ಹಳ್ಳಕ್ಕೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುವ ಮೂಲಕ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುತ್ತ ಹೆಜ್ಜೆಯನ್ನಿಟ್ಟಿದ್ದೇವೆ. ಶೀಘ್ರದಲ್ಲಿ ಉತ್ತಮ ಗುಣಮಟ್ಟದೊಂದಿಗೆ ಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ,ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಊರಿನ ಹಿರಿಯರು, ಗಣ್ಯರು, ಜನಪ್ರತಿನಿಧಿಗಳು,ಅಧಿಕಾರಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. www.avintv.com