day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ಇವರಿಗೆ ಮೂಡಿಗೆರೆ ಹಾಗೂ ಬಣಕಲ್ ಹೋಬಳಿ ಘಟಕದ ವತಿಯಿಂದ ಭಾ ವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ.* – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ಇವರಿಗೆ ಮೂಡಿಗೆರೆ ಹಾಗೂ ಬಣಕಲ್ ಹೋಬಳಿ ಘಟಕದ ವತಿಯಿಂದ ಭಾ ವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ.*

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಕನ್ನಡದ ಖ್ಯಾತ ಹಿರಿಯ ಸಾಹಿತಿ
ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ ಇವರಿಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ಹಾಗೂ ಬಣಕಲ್ ಹೋಬಳಿ ಘಟಕದ ವತಿಯಿಂದ ಭಾ ವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ.*

ಕನ್ನಡ ಸಾಹಿತ್ಯ ಲೋಕದಲ್ಲಿ ‘ಎನ್ನೆಸ್ಸೆಲ್,’ ಎಂದೇ ಮನೆಮಾತಾಗಿದ್ದ ‘ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ’ರು,
ಕನ್ನಡ ಸಾಹಿತ್ಯದ ಅಗ್ರಮಾನ್ಯ ಕವಿ, ಜನಪ್ರಿಯ ಪ್ರಾಧ್ಯಾಪಕ, ಏಟ್ಸ್, ಎಲಿಯಟ್, ಷೇಕ್ಸ್ ಪಿಯರ್ ಕಾವ್ಯವನ್ನು ಅನನ್ಯವಾಗಿ ಕನ್ನಡಕ್ಕೆ ತಂದ ಡಾ.ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು ಧೀರ್ಘ ಕಾಲದ ಅನಾರೋಗ್ಯದಿಂದ ಶನಿವಾರ(ಮಾ.6) ಬೆಳಗಿನ ಜಾವ 4:45ರ ಹೊತ್ತಿಗೆ ಕೊನೆಯುಸಿರೆಳೆದರು.

ಭಾವಗೀತೆ ಸಾಹಿತ್ಯ ವಿಮರ್ಶೆ, ಅನುವಾದ, ನವ್ಯಕವಿತೆ, ಮಕ್ಕಳಿಗಾಗಿ ಗೀತೆಗಳ ರಚನೆ ಮುಂತಾದ ಹಲವು ಪ್ರಕಾರಗಳಲ್ಲಿ ಕೃಷಿ ಮಾಡಿದ್ದ ಅವರು ಕನ್ನಡ-ಸಂಸ್ಕೃತ-ಇಂಗ್ಲೀಷ್ ಭಾಷೆಗಳಲ್ಲಿ ಸಾಹಿತ್ಯ ಕೃಷಿ ಮಾಡಿದ್ದರು.

ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರು 1936 ಅಕ್ಟೋಬರ್ 29 ರಂದು ಶಿವಮೊಗ್ಗದಲ್ಲಿ ಜನಿಸಿದರು. ಇವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಎಂ.ಎ ಪದವಿ ಪಡೆದ ಬಳಿಕ ಭಟ್ಟರು ಭಾಷಾಶಾಸ್ತ್ರ ಸಂಶೋಧಕರಾಗಿ ಎರಡು ವರ್ಷ ಕೆಲಸ ಮಾಡಿ, ನಂತರ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದರು.
‘ಹೊರಳು ದಾರಿಯಲ್ಲಿ ಕಾವ್ಯ’ ವಿಮರ್ಶಾಗ್ರಂಥಕ್ಕೆ 1974ರಲ್ಲಿ ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ’ , ‘ಅನಕೃ ಪ್ರಶಸ್ತಿ’ ಸೇರಿ ಹಲವು ಪ್ರಶಸ್ತಿಗಳು ಇವರಿಗೆ ಲಭಿಸಿವೆ.

ನವ್ಯ ಸಂಪ್ರದಾಯದ ಕವಿತೆಗಳನ್ನು ಬರೆಯುವುದರಲ್ಲಿ ಆಸಕ್ತರಾಗಿದ್ದ, ಭಟ್ಟರು ರಚಿಸಿದ ಗೀತಕಾವ್ಯಗಳ ಸಂಖ್ಯೆ ಅಪಾರ. ಶಿವಮೊಗ್ಗ ಸುಬ್ಬಣ್ಣ, ಸಿ.ಅಶ್ವಥ್, ಮೈಸೂರು ಅನಂತಸ್ವಾಮಿ, ’ಎಚ್.ಕೆ.ನಾರಾಯಣ’ ಮೊದಲಾದ ಸುಗಮ ಸಂಗೀತ ಗಾಯಕರು ಭಟ್ಟರ ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತೆ ಮಾಡಿದರು.ಶಿಶುನಾಳ ಶರೀಫ಼ರ ತತ್ವಪದಗಳಿಗೆ ಅರ್ಥಗರ್ಭಿತವಾದ ವಿವರಣೆ ಸಹಿತ ಸಾಹಿತ್ಯ ರಚಿಸಿದ್ದರು.ಅದನ್ನು ಶಿವಮೊಗ್ಗ ಸುಬ್ಬಣ್ಣ ಅಶ್ವಥ್ ಮುಂತಾದವರು ಹಾಡಿದ್ದರು.

ದೀಪಿಕಾ’ ’ಭಾವಸಂಗಮ’ ’ನೀಲಾಂಜನ’ ’ಬಾರೋ ವಸಂತ’ ’ಕವಿತಾ’ ’ಮಾಧುರಿ’ ’ಮಂದಾರ’ ’ಬಂದೆ ಬರತಾವ ಕಾಲ’ ’ಅರುಣ ಗೀತೆ, ’ಊರ ಹೊರಗೆ, ’ಕವನ’ ’ಬಿಡುಗಡೆ’ ’ಇದಲ್ಲ ತಕ್ಕ ಗಳಿಗೆ’ ’ಅವತಾರ’ ’ಹಿರಿಯರು’ ’ಕೃತಜ್ಞತೆ’ ’ಪ್ರೀತಿ’ ’ಸವಾರಿ’ ’ಸೀಮಂತಿನಿ’ ’ಮಗನಿಗೊಂದು ಪತ್ರ’ ’ಮೊದಲಾದ ಸಮರ್ಥ ಕವನಗಳನ್ನು ಕೊಟ್ಟ ಭಟ್ಟರು ರಾಜ್ಯ ಮಟ್ಟದ ಸುಗಮ ಸಂಗೀತ ಸಮ್ಮೇಳನದ ಅಧ್ಯಕ್ಷರು ಕೂಡಾ ಆಗಿ ಸುಗಮ ಸಂಗೀತ ಪರಿಷತ್ತಿಗೆ ಘನತೆಯನ್ನು ತಂದು ಕೊಟ್ಟಂತವರು.

ಇಂತಹ ಹಿರಿಯ ಕವಿಯ ಆತ್ಮಕ್ಕೆ ಚಿರಶಾಂತಿ ಕೋರಿ ಕನ್ನಡ ಸಾಹಿತ್ಯ ಪರಿಷತ್ತು ಮೂಡಿಗೆರೆ ತಾಲ್ಲೂಕು ಮತ್ತು ಬಣಕಲ್ ಹೋಬಳಿ ಘಟಕದ ವತಿಯಿಂದ ಕೊಟ್ಟಿಗೆಹಾರದ ಸ್ಪೂರ್ತಿ ಮಿತ್ರ ಮಂಡಳಿ ಗ್ರಂಥಾಲಯದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮಗ್ಗಲಮಕ್ಕಿ ಗಣೇಶ್. ಬಣಕಲ್ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಸಂತ್ ಹಾರ್ಗೋಡು. ಸಾಹಿತಿಗಳು ಹಾಗೂ ಶಿಕ್ಷಕರಾದ ಪೂರ್ಣೇಶ್ ಮತ್ತಾವರ. ಪತ್ರಿಕಾ ವರದಿಗಾರರಾದ ನಂದೀಶ್ ಬಂಕೇನಹಳ್ಳಿ. ಅನಿಲ್ ಮೊಂತೆರೊ. ತನು ಕೊಟ್ಟಿಗೆಹಾರ. ಶಿಕ್ಷಕರಾದ ಭಕ್ತೇಶ್. ಶೇಖರಪ್ಪ. ಲಿಂಗರಾಜು. ಅವಿನಾಶ್. ಹಾಗೂ ಜಯಪಾಲ್. ಶಂಕರ್. ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ.
ಮಗ್ಗಲಮಕ್ಕಿ ಗಣೇಶ್.
ನ್ಯೂಸ್ ಬ್ಯೂರೊ.
ಅವಿನ್ ಟಿ.ವಿ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author