ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪುರಸ್ಕಾರ ಪರೀಕ್ಷಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು
1 min readಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು
ದಿನಾಂಕ.26.03.2021 ರಂದು ಚಿಕ್ಕಮಗಳೂರು ಸ್ಕೌಟ್ ಮತ್ತು ಗೈಡ್ಸ್ ಭವನದಲ್ಲಿ ರಾಜ್ಯಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಪುರಸ್ಕಾರ ಪರೀಕ್ಷಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು.
ಸ್ಕೌಟ್ ವಿಭಾಗದಲ್ಲಿ 71 ಮತ್ತು ಗೈಡ್ಸ್ ವಿಭಾಗದಲ್ಲಿ 92 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.
ಸ್ಕೌಟ್ ವಿಭಾಗದ ನಾಯಕರಾಗಿ ಶ್ರೀ ಪ್ರತಿಮ್ ಕುಮಾರ್ LT ಸ್ಕೌಟ್ ರವರು ಕಾರ್ಯನಿರ್ವಹಿಸಿದರು.
ಗೈಡ್ಸ್ ವಿಭಾಗದ ನಾಯಕಿಯಾಗಿ ಶ್ರೀಮತಿ ಕಾಮೇಶ್ವರಿ LT ಗೈಡ್ಸ್ ರವರು ಕಾರ್ಯನಿರ್ವಹಿಸಿದರು.
ಮತ್ತು ಮೊಹಮ್ಮದ್ ತುಂಬೆ ALT ಸ್ಕೌಟ್ ರವರು ಸಹ ಶಿಬಿರದಲ್ಲಿ ಹಾಜರಿದ್ದು ಶಿಬಿರದ ಯಶಸ್ಸಿಗೆ ಕಾರಣರಾದರು,
ಸ್ಕೌಟ್ ವಿಭಾಗದಲ್ಲಿ 19 ಶಿಕ್ಷಕರು. ಗೈಡ್ಸ್ ವಿಭಾಗದಲ್ಲಿ 15 ಶಿಕ್ಷಕಿಯರು ಕಾರ್ಯನಿರ್ವಹಿಸಿ ಶಿಬಿರವನ್ನು ಯಶಸ್ವಿಗೊಳಿಸಿದರು.
ಶಿಬಿರಕ್ಕೆ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಎಂ ಎನ್ ಷಡಕ್ಷರಿ ರವರು ಮತ್ತು ಜಿಲ್ಲಾ ಆಯುಕ್ತರು ಸ್ಕೌಟ್ ಎ. ಎನ್. ಮಹೇಶ್ ರವರು ಆಗಮಿಸಿ ಮಕ್ಕಳಿಗೆ ಶುಭಕೋರಿದರು.
ಶಿಬಿರಕ್ಕೆ ಸಹಕಾರ ಮತ್ತು ಮಾರ್ಗದರ್ಶನ ನೀಡಿದ ರಾಜ್ಯ ಮುಖ್ಯ ಆಯುಕ್ತರಾದ ಗೌರವಾನ್ವಿತ ಶ್ರೀ ಪಿಜಿಆರ್ ಸಿಂಧ್ಯ ಸರ್ ರವರಿಗೆ ಹಾಗೂ ರಾಜ್ಯ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳಿಗೂ, ಶಿಬಿರದಲ್ಲಿ ಭಾಗವಹಿಸಿ ಯಶಸ್ವಿಗೆ ಕಾರಣರಾದ ಸ್ಕೌಟ್ ಮಾಸ್ಟರ್ಸ್ ಮತ್ತು ಗೈಡ್ ಕ್ಯಾಪ್ಟನ್ ಗಳಿಗೂ, ಸೇವೆಸಲ್ಲಿಸಿದ ಎಸ್ ಟಿ ಜೆ. ಪದವಿ ಕಾಲೇಜಿನ ರೇಂಜರ್ಸ್ ವಿದ್ಯಾರ್ಥಿಗಳಿಗೆ, ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳಿಗೆ ಎಲ್ಲರಿಗೂ ಜಿಲ್ಲಾ ಸಂಸ್ಥೆ ವತಿಯಿಂದ ತುಂಬು ಹೃದಯದ ಧನ್ಯವಾದಗಳು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.