day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಪ್ರತಿಯೊಬ್ಬರು ಜೀವನದಲ್ಲಿ ಹಾಸ್ಯ ಪ್ರಜ್ಞೆ ಬೆಳೆಸಿಕೊಳ್ಳಬೇಕು.ಶ್ರೀ ಮಗ್ಗಲಮಕ್ಕಿ ಗಣೇಶ್ ಅಭಿಪ್ರಾಯಪಟ್ಟರು.#avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

ಪ್ರತಿಯೊಬ್ಬರು ಜೀವನದಲ್ಲಿ ಹಾಸ್ಯ ಪ್ರಜ್ಞೆ ಬೆಳೆಸಿಕೊಳ್ಳಬೇಕು.ಶ್ರೀ ಮಗ್ಗಲಮಕ್ಕಿ ಗಣೇಶ್ ಅಭಿಪ್ರಾಯಪಟ್ಟರು.#avintvcom

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಪ್ರತಿಯೊಬ್ಬರು ಜೀವನದಲ್ಲಿ ಹಾಸ್ಯ ಪ್ರಜ್ಞೆ ಬೆಳೆಸಿಕೊಳ್ಳಬೇಕು.
ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಹಾಸ್ಯಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಗ್ಗಲಮಕ್ಕಿ ಗಣೇಶ್ ಅಭಿಪ್ರಾಯಪಟ್ಟರು.
ಕನ್ನಡ ಸಾಹಿತ್ಯ ಪರೀಷತ್ತು ಮೂಡಿಗೆರೆ ಹಾಗೂ ಹೋಬಳಿ ಘಟಕದ ವತಿಯಿಂದ ಪಟ್ಟದೂರಿನಲ್ಲಿ ಆಯೋಜಿಸಿದ್ದ ಮಾರ್ಚ್ ತಿಂಗಳ ಮನೆಯಂಗಳದಲ್ಲಿ ತಿಂಗಳ ಸಾಹಿತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮನುಷ್ಯ ತನ್ನ ಜೀವನದಲ್ಲಿನ ಪ್ರತಿಯೊಂದು ಘಟನೆಯಲ್ಲೂ ಹಾಸ್ಯ ಅಡಗಿದೆ. ಅದನ್ನು ತಿಳಿಯಬೇಕಾದರೆ ಮೊದಲು ಹಾಸ್ಯಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು. ಹಾಸ್ಯಪ್ರಜ್ಞೆಯಿಂದ ಜೀವನದಲ್ಲಿನ ಅದೆಷ್ಠೋ ಸಮಸ್ಯೆಗಳನ್ನು ದಿಟ್ಟತನದಿಂದ ಎದುರಿಸಲು ಕೆಲವರು ಸಮರ್ಥರಾಗುತ್ತಾರೆ ಎಂದರು.ತಮ್ಮ ಜೀವನದ ಅನುಭವಗಳಿಗೆ ಹಾಸ್ಯದ ಮೆರುಗನ್ನು ನೀಡಿ ಮಾಡಿದ ಹಾಸ್ಯ ಭಾಷಣ ನೆರೆದಿರುವವರನ್ನು ರಂಜಿಸಿತು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ವಸಂತ್ ಹಾರ್ಗೋಡು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಸಮಾಜವನ್ನು ಬದಲಾವಣೆಯತ್ತ ಕೊಂಡೊಯ್ಯಲು ಇರುವ ಮಾರ್ಗ ಅದು ಶಿಕ್ಷಣ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ತಮ್ಮ ಮಕ್ಕಳಿಗೆ ವಿದ್ಯೆಯನ್ನು ಕೊಡಿಸಿ ಅವರನ್ನು ಶಿಕ್ಷಣವಂತರಾಗಿ ಮಾಡುವಲ್ಲಿ ಬಹಳಷ್ಟು ಜವಬ್ದಾರಿಯಿದೆ ಎಂದರು.
ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಬಕ್ಕಿ ಮಂಜುನಾಥ್. ಮಾತನಾಡಿ ಬಣಕಲ್ ಹೋಬಳಿಯ ಗ್ರಾಮಗಳಲ್ಲಿ ನಡೆದ 28ನೇ ಮನೆಯಂಗಳದಲ್ಲಿ ತಿಂಗಳ ಸಾಹಿತ್ಯ ಕಾರ್ಯಕ್ರಮ ಇದಾಗಿದ್ದು ಅಷ್ಟೂ ಕಾರ್ಯಕ್ರಮಗಳಲ್ಲಿ ಬಹಳಷ್ಟು ಪ್ರತಿಭೆಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ಬಣಕಲ್ ಹೋಬಳಿ ಘಟಕ ವೇದಿಕೆಯನ್ನು ಕಲ್ಪಿಸಿ ಉದಯೋನ್ಮುಖ ಪ್ರತಿಭೆಗಳನ್ನು ಹುಡುಕುವ ಕಾರ್ಯದಲ್ಲಿ ತೊಡಗಿರುವುದು ಶ್ಲಾಘನಿಯ ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾದ ಶ್ರೀ ಶಾಂತಕುಮಾರ್ ಮಾತನಾಡಿ ಪ್ರತಿಯೊಬ್ಬರು ಶಿಕ್ಷಣವನ್ನು ಪಡೆದು ಸಮಾಜದ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಮಂಜಯ್ಯ ಮತ್ತು ಗೋಪಮ್ಮ ಕಂಜರ ಭಾರಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಕಾರ್ಯಕ್ರಮವನ್ನು ನಿರೂಪಿಸಿದರು.
ಶಿಕ್ಷಕರಾದ ಕೃಷ್ಣ. ಗಾಯಕರಾದ ಬಕ್ಕಿ ರವಿ. ಮಂಜುನಾಥ್ ಗ್ರಾಮದ ಕಲಾವಿದರು ಜಾನಪದ ಹಾಗೂ ಕನ್ನಡ ಗೀತೆಗಳನ್ನು ಹಾಡಿ ಕಾರ್ಯಕ್ರಮದಲ್ಲಿದ್ದವರನ್ನು ರಂಜಿಸಿದರು. ಶಿಕ್ಷಕಿ ಇಂಪಾ ಸರ್ವರನ್ನು ಸ್ವಾಗತಿಸಿದರು ಹಾಗೂ ನಂದೀಶ್ ಬಂಕೇನಹಳ್ಳಿ ವಂದಿಸಿದರು. ಬಹಳ ಅರ್ಥಗರ್ಭಿತವಾಗಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕಿ ಅಶ್ವಿನಿ. ಮಂಜುನಾಥ್. ರವಿ. ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೊ ನ್ಯೂಸ್.
ಅವಿನ್ ಟಿ.ವಿ

ಉದ್ಯೋಗ ಲಭ್ಯವಿದೆ | ಉಚಿತ ವಸತಿ ಮತ್ತು ಊಟ | ಸೀಮಿತ ಸೀಟುಗಳು ಮಾತ್ರ ಲಭ್ಯವಿದೆ | ತಕ್ಷಣವಾಗಿ ಅರ್ಜಿಯನ್ನು ಹಾಕಿ | Jobs available | With free accommodations and meals | Only limited seats available | Apply immediately |

About Author