ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ ಹಾರ ಹಾಕಿ ಅಣಕು ಶ್ರದ್ಧಾಂಜಲಿ #avintvcom
1 min read
ಮೂಡಿಗೆರೆ ಬಸ್ ನಿಲ್ದಾಣದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನಿಗೆ ಹಾರ ಹಾಕಿ ಅಣಕು ಶ್ರದ್ಧಾಂಜಲಿ
ಕೆಎಸ್ಆರ್ ಟಿಸಿ ನೌಕರರ ಮುಷ್ಕರದ ನಡುವೆಯು ಕರ್ತವ್ಯಕ್ಕೆ ಹಾಜರಾದ ಕೆ ಎಸ್ ಆರ್ ಟಿಸಿ ಚಾಲಕನೊಬ್ಬರಿಗೆ ಮುಷ್ಕರ ನಿರತ ಚಾಲಕರು, ನಿರ್ವಾಹಕರು ಹಾಗೂ ಅವರ ಕುಟುಂಬದ ಸದಸ್ಯರು ಹಾರ ಹಾಕುವ ಮೂಲಕ ಅಣಕು ಶ್ರದ್ಧಾಂಜಲಿ ಸಲ್ಲಿಸಿದರು.
ಮುಷ್ಕರದ ನಡುವೆಯೂ ಸರ್ಕಾರಿ ಬಸ್ಸು ರಸ್ತೆಗಿಳಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ಸಂಖ್ಯೆಯಲ್ಲಿ ಚಾಲಕರು, ನಿರ್ವಾಹಕರು ಅವರ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚಾಲಕರಾದ ಶಂಕರ್ ಮಾತನಾಡಿ ಬೇಡಿಕೆ ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದ್ದು ಇದಕ್ಕೆ ಎಲ್ಲರೂ ಸಂಪೂರ್ಣ ಬೆಂಬಲ ನೀಡಬೇಕು ಎಂದರು.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನಲೆಯಲ್ಲಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಬಸ್ ನಿಲ್ದಾಣದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು ಪೋಲಿಸರು ಸ್ಥಳದಲ್ಲೆ ಬೀಡು ಬಿಟ್ಟಿದ್ದಾರೆ.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.