ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಅಂಗಡಿ ಮುಂಗಟ್ಟು ಬಂದ್ ಮಾಡಿಸಿದ ಪೊಲೀಸರು.#avintvcom
1 min read
ಬಂದ್ ಬಂದ್ ಬಂದ್
ಚಿಕ್ಕಮಗಳೂರು ಜಿಲ್ಲೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಮತ್ತು ಬಣಕಲ್ಲಿನಲ್ಲಿ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆ
ಅಂಗಡಿ ಮುಂಗಟ್ಟು ಬಂದ್ ಮಾಡಿಸಿದ ಪೊಲೀಸರು.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪ್ರವಾಸಿ ತಾಣವಾದ ಬಣಕಲ್ ಮತ್ತು ಕೊಟ್ಟಿಗೆಹಾರದಲ್ಲಿ ಅಗತ್ಯ ವಸ್ತು ಹೊರತು ಪಡಿಸಿ ಮುನ್ನಚ್ಚರಿಕೆಯ ಕ್ರಮವಾಗಿ ಇತರೆ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದರು.
ಬಣಕಲ್ ಪೊಲೀಸ್ ಠಾಣಾದಿಕಾರಿ ಶ್ರೀನಾಥ್ ರೆಡ್ಡಿ ಮಾತನಾಡಿ, ಕೋವಿಡ್ ಎರಡನೇ ಅಲೆ ಆರಂಭವಾಗಿದ್ದು ದಿನೆ ದಿನೇ ಸೋಂಕು ಹೆಚ್ಚಾಗುತ್ತಿದೆ. ಜನರು ಅನಾವಶ್ಯಕವಾಗಿ ಓಡಾಡುತ್ತಿದ್ದಾರೆ. ಮುಖಗವಸು ಕೂಡ ಧರಿಸದೇ ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು.
ಕೋವಿಡ್ ನಿಯಂತ್ರಿಸಲು ನಿಯಮ ಪಾಲಿಸುವುದು ಅತಿ ಮುಖ್ಯವಾಗಿದೆ ಎಂದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್