ಕರ್ಫ್ಯೂ ಹಿನ್ನೆಲೆ! ಬೇಕಾಬಿಟ್ಟಿ ಓಡಾಡುವವರಿಗೆ ಖಡಕ್ ಸೂಚನೆ ನೀಡಿದ ಡಿಸಿಪಿ #avintvcom
1 min read
ಕರ್ಫ್ಯೂ ಹಿನ್ನೆಲೆ! ಬೇಕಾಬಿಟ್ಟಿ ಓಡಾಡುವವರಿಗೆ ಖಡಕ್ ಸೂಚನೆ ನೀಡಿದ ಡಿಸಿಪಿ
ಹುಬ್ಬಳ್ಳಿ- ಕೊರೊನಾ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊರಡಿಸಿದ ಜನತಾ ಕರ್ಪ್ಯೂ ಜಾರಿ ಮಾಡಲಾಗಿದ್ದು, ಹುಬ್ಬಳ್ಳಿ ಜನತೆ ಉತ್ತಮ ರೀತಿಯ ಸ್ಪಂದನೆ ನೀಡುತ್ತಿದ್ದಾರೆ ಎಂದು ಹು-ಧಾ ಕಾನೂನು ಸುವ್ಯವಸ್ಥೆ ಡಿಸಿಪಿ ಕೆ. ರಾಮರಾಜನ್ ಹೇಳಿದರು.
ನಗರದಲ್ಲಿಂದು ಪೊಲೀಸ್ ಬಂದುಬಸ್ತ್ ಬಗ್ಗೆ ಪರಿಶೀಲನೆ ನಡೆಸಿದ ಅವರು, ಸರ್ಕಾರದ ಆದೇಶದಂತೆ ಬೆಳಗ್ಗೆ 6 ರಿಂದ 10 ಘಂಟೆ ವರೆಗೆ ದಿನನಿತ್ಯ ಬಳಕೆ ವಸ್ತುಗಳನ್ನು ಖರೀದಿಸಲು ಅವಕಾಶ ಮಾಡಿಕೊಟ್ಟಿದ್ದು, 10 ಘಂಟೆ ಮೇಲ್ಪಟ್ಟ ಸಮಯದಲ್ಲಿ ಅನಾವಶ್ಯಕವಾಗಿ ತಿರುಗಾಡುತ್ತಿರುವವರು ಹೆಚ್ಚಾಗಿದ್ದು, ಆದರೂ ನಮ್ಮ ಸಿಬ್ಬಂದಿ ಸಾರ್ವಜನಿಕರ ಜೊತೆಗೆ ಸೌಹಾರ್ಧಯುತವಾಗಿ ವರ್ತಿಸುತ್ತಿದ್ದು ಸಂತಸ ಸಂಗತಿಯಾಗಿದೆ. ಲಾಕ್ ಡೌನ್ ಉಲ್ಲಂಘನೆ ಮಾಡಿ ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ತಪಾಸಣೆ ಮಾಡಿ ಹಾಗೂ ದಂಡ ಹಾಕಿ ಸೀಜ್ ಮಾಡಲಾಗುತ್ತಿದೆ. ಸಾರ್ವಜನಿಕರು ಕೂಡ ಸರ್ಕಾರ ಆದೇಶ ಪಾಲನೆ ಮಾಡಬೇಕು. ಇಲ್ಲವಾದ್ರೆ ಅವರಿಗೆ ಸಮಸ್ಯೆಯಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಬೈಟ್- ಕೆ. ರಾಮರಾಜನ್, ಕಾನೂನು ಸುವ್ಯವಸ್ಥೆ ಡಿಸಿಪಿ