*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ *ನ್ಯಾಯಾಲಯದ ವಿಶೇಷ ಲಸಿಕಾ ಶಿಬಿರ ಆಹಾರದ ವ್ಯವಸ್ಥೆ ಕಲ್ಪಿಸಲಾಯಿತು. #avintvcom
1 min read
*ಮುಂದುವರಿದ ಸಹಾಯ ಹಸ್ತ*
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.
ಜಿಲ್ಲಾ ಸಂಸ್ಥೆ ವತಿಯಿಂದ ದಿನಾಂಕ 28.05.2021 ರಂದು ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನ್ಯಾಯಾಧೀಶರು, ವಕೀಲರು, ನ್ಯಾಯಾಲಯದ ಸಿಬ್ಬಂದಿಗಳಿಗೆ ವಿಶೇಷ ಲಸಿಕಾ ಶಿಬಿರವನ್ನು ಆಯೋಜಿಸಲಾಗಿದ್ದು,
ಈ ಶಿಬಿರದಲ್ಲಿ ಇಂದು ಸೇವೆ ಸಲ್ಲಿಸಲಾಯಿತು,
ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಸಿಬ್ಬಂದಿಗಳಿಗೆ ಜಿಲ್ಲಾ ಸಂಸ್ಥೆಯಿಂದ ಆಹಾರದ ವ್ಯವಸ್ಥೆಯನ್ನು ಕಲ್ಪಿಸಲಾಯಿತು.
ಬ್ರಾಹ್ಮಣ ಮಹಾಸಭಾ ಚಿಕ್ಕಮಗಳೂರು ಇವರಿಂದ ಈ ದಿನದ ಆಹಾರ ವ್ಯವಸ್ಥೆಯನ್ನು ಮಾಡಿಕೊಟ್ಟಿದ್ದು, ಇವರಿಗೆ ಜಿಲ್ಲಾ ಸಂಸ್ಥೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳು
ಈ ಕಾರ್ಯದಲ್ಲಿ ಜಿಲ್ಲಾ ಮುಖ್ಯ ಆಯುಕ್ತರಾದ ಎಂ.ಎನ್.ಷಡಕ್ಷರಿ ರವರು,
ಜಿಲ್ಲಾ ಕಾರ್ಯದರ್ಶಿ ಶ್ರೀ ಪಣಿರಾಜ್,
ಜಿಲ್ಲಾ ಸಹಾಯಕ ಆಯುಕ್ತರು ಡಾಕ್ಟರ್ ಶ್ರೀನಿವಾಸ್ ರವರು, ಹಾಗೂ ಜಿಲ್ಲಾ ಸಂಘಟಕರುಗಳಾದ ಕಿರಣ್, ನವೀನ್
ಮತ್ತು ಗೈಡ್ ಕ್ಯಾಪ್ಟನ್ ಸುಪ್ರಿಯಾ ರವರು ಹಾಜರಿದ್ದರು..
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.