ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡ ಸಮಾಜ ಸೇವಕ#avintvcom
1 min read
ಜನ್ಮ ದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಂಡ ಸಮಾಜ ಸೇವಕ
ಹುಬ್ಬಳ್ಳಿ- ಸರ್ವಧರ್ಮ ಸಮಾಜ ಸೇವಕ ರಮೇಶ ಮಹಾದೇವಪ್ಪನವರ ತಮ್ಮ ಹುಟ್ಟು ಹುಬ್ಬದ ಅಂಗವಾಗಿ, ನಗರದ ಪ್ರೇಮ ಬಿಂದು ರಕ್ತ ನಿಧಿ ಕೇಂದ್ರದಲ್ಲಿ ಬೆಂಗೆರಿ ಬ್ಲಡ್ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳುವ ಮೂಲಕ ವಿಶೇಷವಾಗಿ ಜನ್ಮ ದಿನ ಆಚರಣೆ ಮಾಡಿಕೊಂಡಿದ್ದಾರೆ.
ಹೌದು,,,, ಕೊರೊನಾ ಅಟ್ಟಹಾಸ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ಬಹಳಷ್ಟು ಜನರು ಮುಂದೆ ಬರದ ಕಾರಣ, ಇವರ ಆಪ್ತ ಸಹಾಯಕರಾದ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಕಲಂದರ ಮುಲ್ಲಾ, ಖಾಸಿಮ್ ಕುಡಲಗಿ, ಹಾಗೂ ಅವರ ಗೆಳೆಯರ ಬಳಗದ ವತಿಯಿಂದ ಸುಮಾರು 50 ಕ್ಕೂ ಹೆಚ್ಚು ಯುವಕರು ರಕ್ತ ದಾನ ಮಾಡುವ ಮೂಲಕ ರಕ್ತದ ಕೊರತೆ ನೀಗಿಸುವ ಕೆಲಸ ಮಾಡಿದರು. ಎಲ್ಲರೂ ಸಹ ರಕ್ತದಾನ ಮಾಡಿ ಅದೆಷ್ಟೋ ಜೀವವನ್ನು ಉಳಿಸಬಹುದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.