AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಸಂಸ್ಥೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮ #avintvcom

1 min read
Featured Video Play Icon

*ಪರಿಸರ ದಿನಾಚರಣೆ*

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾ ಸಂಸ್ಥೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ನಗರದ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮುಖ್ಯ ಆಯುಕ್ತರು ಹಾಗೂ ಮಾಡೆಲ್ ಆಂಗ್ಲಮಾಧ್ಯಮ ಶಾಲೆಯ ಸಂಸ್ಥಾಪಕರಾದ ಶ್ರೀ ಎಂ ಎನ್ ಷಡಕ್ಷರಿಯವರು ಸಸಿಗಳನ್ನು ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ತದನಂತರ ಮಾತನಾಡಿದವರು ಪ್ರಸ್ತುತ ಸಂದರ್ಭದಲ್ಲಿ ಪರಿಸರದಲ್ಲಿ ಆಮ್ಲಜನಕದ ಪ್ರಮಾಣವು ದಿನೇ ದಿನೇ ಕಡಿಮೆಯಾಗುತ್ತಿರುವುದು, ಪ್ರತಿನಿತ್ಯ ವಾಯು ಮಾಲಿನ್ಯದಿಂದಾಗಿ ಗಾಳಿಯು ಕಲುಷಿತಗೊಳ್ಳುತ್ತಿದೆ, ಉತ್ತಮ ಆರೋಗ್ಯ ಹೊಂದಬೇಕಾದರೆ ಪರಿಸರದಲ್ಲಿ ನಮ್ಮ ಆರೋಗ್ಯಕ್ಕೆ ಸ್ವಚ್ಛ ಗಾಳಿ ಅವಶ್ಯಕತೆ ಇದೆ, ವಿಶ್ವ ಪರಿಸರ ದಿನಾಚರಣೆ ಎಂದು ನಾವೆಲ್ಲರೂ ಬದ್ಧರಾಗಿ ವಾಯು ಮಾಲಿನ್ಯವನ್ನು ತಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಅನುಸರಿಸಬೇಕು ತಿಳಿಸಿದರು.
ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಮನುಷ್ಯನಿಗೆ ಆಕ್ಸಿಜನ್ ಮಹತ್ವ ತಿಳಿದಿದ್ದು, ಪ್ರತಿನಿತ್ಯ ಪರಿಸರವು ನಮಗೆ ಉಚಿತವಾಗಿ ಆಕ್ಸಿಜನ್ ನೀಡುತ್ತಿದ್ದು ನಾವೆಲ್ಲರೂ ಪರಿಸರದ ಕಾಳಜಿ ಮಾಡಿ ಹೆಚ್ಚು ಹೆಚ್ಚು ಸಸಿಗಳನ್ನು ನೆಟ್ಟು ಪರಿಸರವನ್ನು ಸಂರಕ್ಷಿಸಬೇಕಾಗಿ ಕರೆ ನೀಡಿದರು.

ಈ ಕಾರ್ಯದಲ್ಲಿ ಶಾಲೆಯ ಪ್ರಾಂಶುಪಾಲರಾದ ಶ್ರೀ ಅಬ್ದುಲ್ ಮಲ್ಲಿಕ್, ಜಿಲ್ಲಾ ಸಂಸ್ಥೆಯ ಸಂಘಟಕರಗಳಾದ ಕಿರಣ್, ನವೀನ್, ಸ್ಕೌಟ್ ಮಾಸ್ಟರ್ ರಾಘವೇಂದ್ರ, ಗೈಡ್ಸ್ ವಿದ್ಯಾರ್ಥಿ ಶ್ರೇಯ ,ಹಾಗೂ ಶಾಲೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author