ಬಹುಜನ ಸಮಾಜ ಪಕ್ಷ ವತಿಯಿಂದ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ದರ ಹೆಚ್ಚಳ ಹಿನ್ನಲೆಯಲ್ಲಿ ಪ್ರತಿಭಟನೆ*#avintvcom
1 min read
*ಪ್ರತಿಭಟನೆ*
ಬಹುಜನ ಸಮಾಜ ಪಕ್ಷ ಮೂಡಿಗೆರೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಲೆ ಏರಿಕೆ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅನಿಲ ದರ ಹೆಚ್ಚಳ ಹಿನ್ನಲೆಯಲ್ಲಿ ಮೂಡಿಗೆರೆ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟಸಿಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿ ಎಸ್ ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕಿರ್ ಹುಸೇನ್- ವಾಮ ಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಯವರ ಕೇಂದ್ರ ಸರ್ಕಾರ ಜನರ ವಿರುದ್ಧವಾದ ಆಡಳಿತ ನಡೆಸುತ್ತ ಬಂದಿದೆ. ಕೋವಿಡ್-19 ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.
ಜನರು ಸಂಕಷ್ಟದ ಸ್ಥಿತಿಯಲ್ಲಿ ಇದ್ದಾಗ ಅವರ ಮೇಲೆ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಬದುಕನ್ನು ಕಿತ್ತುಕೊಳ್ಳುತ್ತಿರುವಿದು ದುರಂತ ಎಂದರು.
ಬಿಎಸ್ಪಿ ಜಿಲ್ಲಾ ಸಂಯೋಜಕರು ಯು.ಬಿ.ಮಂಜಯ್ಯ ಮಾತನಾಡಿ-
ಬಿಜೆಪಿ ಸರ್ಕಾರದ ದಬ್ಬಾಳಿಕೆಯಿಂದ ಜನ ಬೇಸತ್ತು ಹೋಗಿದ್ದಾರೆ
ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.ಹಾಗಾಗಿ ಜನರ ಶಾಪಕ್ಕೆ ಗುರಿಯಾಗಿದ್ದಾರೆ.
ಬೆಲೆ ಏರಿಕೆ ನಿಯಂತ್ರಣಕ್ಕೆ ಕಡಿವಾಣ ಹಾಕುವ ಯಾವುದೇ ಇಚ್ಛೆ ಇವರಿಗೆ ಇಲ್ಲ.
ಮುಂದಿನ ದಿನಗಳಲ್ಲಿ ದೇಶದ ಜನ ತಕ್ಕ ಪಾಠ ಕಲಿಸುತ್ತಾರೆ ಎಂದರು.
ಕ್ಷೇತ್ರ ಸಮಿತಿ ಅಧ್ಯಕ್ಷ ಎಲ್ .ಬಿ. ರಮೇಶ್ ಮಾತನಾಡಿ-ಕೋವಿಡಿಗಿಂತ ಅಪಾಯಕಾರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಇವರಿಗೆ ಅಧಿಕಾರ ನಡೆಸಲು ಯೋಗ್ಯತೆ ಇಲ್ಲ ದಿನ ನಿತ್ಯ ಪೆಟ್ರೋಲ್ ಡೀಸೆಲ್ ದರವನ್ನು ಮನ ಬಂದಂತೆ ಏರಿಕೆ ಮಾಡಿ ಅವೈಜ್ಞಾನಿಕ ತೆರಿಗೆ ವಸೂಲಿ ಮಾಡುತ್ತಿದ್ದಾರೆ.
ಕೂಡಲೇ ಪೆಟ್ರೋಲ್ ಡೀಸೆಲ್ ದರದ ಮೇಲೆ ಜಿ ಎಸ್ ಟಿ ಹಾಕಲಿ ಎಂದರು.
ಈ ಒಂದು ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯದರ್ಶಿ ಜಾಕಿರ್ ಅಲಿಖಾನ್,ಜಿಲ್ಲಾ ಉಪಾಧ್ಯಕ್ಷ
ಬಿ.ಎಂ. ಶಂಕರ್,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಕ್ಕಿ ಮಂಜುನಾಥ್, ಬಿ ವಿ ಎಫ್ ಜಿಲ್ಲಾ ಸಂಯೋಜಕ ಬಿ ರಾಮು,
ಯು ಬಿ ನಾಗೇಶ್,
ಮಹೇಶ್ ಉದುಸೆ,
ನಾಗರಾಜ್,ಕುಮಾರ್,
ಲಕ್ಷ್ಮಣ್ ದೊಡ್ಡಯ್ಯ, ಹಮೀದ್,ಚಂದ್ರಶೇಖರ್,ಮುಂತಾದವರು ಭಾಗವಹಿಸಿದ್ದರು.
ಇದೆ ಸಂದರ್ಭದಲ್ಲಿ ಡಿ ಕೆ ತಾರದೇವಿಯವರ ಪತಿ ಸಿದ್ದಾರ್ಥರೆಡ್ಡಿ ಇವರ ನಿಧಾನಕ್ಕೆ ಸಂತಾಪ ಸೂಚಿಸಲಾಯಿತು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.