*ಮುಂದುವರಿದ ಸಹಾಯ ಹಸ್ತ*ಜಿಲ್ಲಾ ಲಸಿಕಾ ಕೇಂದ್ರದಲ್ಲಿ ಉಚಿತವಾಗಿ ಲಸಿಕೆ#avintvcom
1 min read
*ಮುಂದುವರಿದ ಸಹಾಯ ಹಸ್ತ*
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು,
ದಿನಾಂಕ 12. 6 .2021 ರಂದು ಜಿಲ್ಲಾ ಸಂಸ್ಥೆ ವತಿಯಿಂದ ವಿಶೇಷವಾಗಿ ಜಿಲ್ಲೆಯ ರೋವರ್ಸ್ ಮತ್ತು ರೇಂಜರ್ಸ್ಗಳಿಗೆ , ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್ ಗಳಿಗೆ, ರೋವರ್ಸ್ ಮತ್ತು ರೇಂಜರ್ಸ್ ಲೀಡರ್ ಗಳಿಗೆ, ಇಂದು ಜಿಲ್ಲಾ ಸಂಸ್ಥೆ ವತಿಯಿಂದ ಜಿಲ್ಲಾ ಲಸಿಕಾ ಕೇಂದ್ರದಲ್ಲಿ ಉಚಿತವಾಗಿ ಲಸಿಕೆಯನ್ನು ನೀಡಲಾಯಿತು.
ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಎಂ ಎನ್ ಷಡಕ್ಷರಿ ರವರು ಜಿಲ್ಲಾ ಸಂಸ್ಥೆ ವತಿಯಿಂದ ಲಸಿಕೆಯನ್ನು ಪಡೆಯುವವರಿಗೆ ಶುಭಕೋರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳಾದ ,ಜಿಲ್ಲಾ ಆಯುಕ್ತರು ಸ್ಕೌಟ್ ಶ್ರೀ ಎ ಎನ್ ಮಹೇಶ್, ಜಿಲ್ಲಾ ಆಯುಕ್ತರು ಗೈಡ್ಸ್ ಶ್ರೀಮತಿ ಮಮತಾ, ಜಿಲ್ಲಾ ಕಾರ್ಯದರ್ಶಿ ಶ್ರೀ ಪಣಿರಾಜ್, ಜಿಲ್ಲಾ ಜಂಟಿ ಕಾರ್ಯದರ್ಶಿಗಳು ಶ್ರೀ ನೀಲಕಂಠ ಚಾರ್, ಜಿಲ್ಲಾ ತರಬೇತಿ ಆಯುಕ್ತರು ಶ್ರೀಮತಿ ಸಂಧ್ಯಾ ರಾಣಿ, ಜಿಲ್ಲಾ ಸ್ಥಾನಿಕ ಆಯುಕ್ತರು, ಯು ಎಸ್. ಪ್ರಕಾಶ್, ರಾಘವೇಂದ್ರ, ಜಿಲ್ಲಾ ಸಂಘಟಕರ ಗಳಾದ ಕಿರಣ್ ಕುಮಾರ್, ನವೀನ್ ಕುಮಾರ್, ಗೈಡ್ ಕ್ಯಾಪ್ಟನ್ ಸುಪ್ರಿಯಾ. ಹಾಗೂ ಜಿಲ್ಲೆಯ ಯೂನಿಟ್ ಲೀಡರ್ಸ್ ಗಳು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.