*ಮಲೆನಾಡ ಬಾಗದಲ್ಲಿ ಶಾಲೆ ತೆರೆಯುವಂತೆ ಒತ್ತಾಯ*#avintvcom
1 min read
*ಮಲೆನಾಡ ಬಾಗದಲ್ಲಿ ಶಾಲೆ ತೆರೆಯುವಂತೆ ಒತ್ತಾಯ*
ʼಮಲೆನಾಡು ಭಾಗದಲ್ಲಿ ಆನ್ಲೈನ್ ಕ್ಲಾಸ್ ಬೇಡʼ
ಶಾಲೆ ತೆರೆಯುವಂತೆ ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹ
ಚಿಕ್ಕಮಗಳೂರು:
.
ಮಲೆನಾಡು ಭಾಗದಲ್ಲಿ ಆನ್ಲೈನ್ ಕ್ಲಾಸ್ ನಡೆಸುತ್ತಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಇದರಿಂದ ಯಾವುದೇ ಪ್ರಯೋಜನವಾಗುತ್ತಿಲ್ಲ. ಆನ್ಲೈನ್ ಕ್ಲಾಸ್ ರದ್ದುಮಾಡಿ ಶಾಲೆಗಳನ್ನು ತೆರೆಯಲಿ ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊಬೈಲ್ ಇಲ್ಲದೆ ಕೂಲಿ ಕಾರ್ಮಿಕರ, ಬಡವರ್ಗದ ಶೇ.50ರಷ್ಟು ಮಕ್ಕಳು ಬೌದ್ಧಿಕವಾಗಿ ದಿವಾಳಿಯಾಗುತ್ತಿದ್ದಾರೆ. ಅವರಿಗೆ ಆಟ-ಪಾಠ ಇಲ್ಲವಾಗಿದೆ.
ಬೇರೆ ದಾರಿ ಏನು ಎಂಬುದೇ ಪೋಷಕರಿಗೆ ತಿಳಿಯದೆ ಕಂಗಾಲಾಗಿದ್ದಾರೆ. ಸ್ಥಿತಿವಂತರು ಮಾತ್ರವೇ ಮಕ್ಕಳಿಗೆ ಮೊಬೈಲ್ ತೆಗೆದುಕೊಡಬಹುದು. ಆನ್ಲೈನ್ ನೆಟ್ವರ್ಕ್ ಸಿಗದೆ ಮರದ ಮೇಲೆ ಹತ್ತಿ ಕುಳಿತುಕೊಳ್ಳೋದು, ಗುಡ್ಡಕ್ಕೆ ಹೋಗೋದು, ಮಳೆಯಲ್ಲಿ ಅಪ್ಪ ಛತ್ರಿ ಹಿಡಿಯೋದು, ಮಗ ಓದೋದು ಹೀಗೆಲ್ಲಾ ಕಷ್ಟಪಟ್ಟು ನರಕಯಾತನೆ ಅನುಭವಿಸುತ್ತಿದ್ದಾರೆ. ಬಡವರ್ಗದವರಿಗೆ ಶಿಕ್ಷಣ ಎಲ್ಲಿ ದೂರವಾಗುತ್ತೋ ಎಂಬ ಆತಂಕ ಎದುರಾಗಿದೆ ಎಂದಿದ್ದಾರೆ.
ಕೊರೋನದಿಂದ ಮಲೆನಾಡಿಗೆ ಭಾರೀ ಅಪತ್ತೇನೂ ಬಂದಿಲ್ಲ. ಪೋಷಕರು ಆತಂಕದಿಂದ ಹೊರಬರಬೇಕು. ಸರ್ಕಾರ ಕೂಡಲೇ ಶಾಲೆಯನ್ನು ಪ್ರಾರಂಭಿಸಬೇಕು ಎಂದು ಮುಖ್ಯಮಂತ್ರಿಗಳು ಮತ್ತು ಪ್ರೌಢಶಿಕ್ಷಣ ಸಚಿವರನ್ನು ಒತ್ತಾಯಿಸುವುದಾಗಿ ಅವರು ತಿಳಿಸಿದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.
http://nisargacare.com/career/