ನೈಜ ಹೋರಾಟಗಾರರ ವೇದಿಕೆ ಸರ್ಕಾರದ ವಿವಿಧ #avintvcom
1 min read
ನೈಜ ಹೋರಾಟಗಾರರ ವೇದಿಕೆ
ಸರ್ಕಾರದ ವಿವಿಧ ಯೋಜನೆಗಳಲ್ಲಿ ಎಂದರೆ ಶುದ್ಧ ಕುಡಿಯುವ ನೀರಿನ ಘಟಕ, ಬಸ್ ತಂಗು ನಿಲ್ದಾಣ, ಆಸ್ಪತ್ರೆ, ಶಾಲೆ, ಕ್ರೀಡಾಂಗಣಗಳಲ್ಲಿ ಸೇರಿದಂತೆ ನಗರದ ಪ್ರತಿ ಅಡ್ಡ ರಸ್ತೆಗಳಲ್ಲಿ ಜನಪ್ರತಿನಿಧಿಗಳ ಫೋಟೋ ಮತ್ತು ಹೆಸರು ಗಳನ್ನು ತೆರವುಗೊಳಿಸುವ ಬಗ್ಗೆ ಭಾರತದ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳು ಉಲ್ಲಂಘಿಸಿದ್ದ ವು.
ಈ ಹಿನ್ನೆಲೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಹೆಚ್. ಎಂ. ವೆಂಕಟೇಶ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಉಚ್ಚ ನ್ಯಾಯಾಲಯವು ಸರ್ಕಾರಕ್ಕೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಜನಪ್ರತಿನಿಧಿಗಳ ಪೋಟೋ ಹೆಸರುಗಳನ್ನು ತೆರವುಗೊಳಿಸಲು ಒಂದು ತಿಂಗಳ ಗಡುವನ್ನು ನೀಡಿದೆ. ಈ ಆದೇಶಕ್ಕೂ ಹೊರತಾಗಿ ತೆರವುಗೊಳಿಸದಿದ್ದಲ್ಲಿ ನ್ಯಾಯಾಂಗ ನಿಂದನೆ ಕ್ರಮವನ್ನು ಜರುಗಿಸುವುದಾಗಿ ನ್ಯಾಯಾಲಯವು ಎಚ್ಚರಿಕೆ ನೀಡಿದೆ.
HMV.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.