AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು*#avintvcom

1 min read
Featured Video Play Icon

*ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಚಿಕ್ಕಮಗಳೂರು*

ದಿನಾಂಕ 30.07.2021 ರಂದು ಜಿಲ್ಲಾ ವಾರ್ಷಿಕ ಮಹಾಸಭೆಯನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು ಶ್ರೀ ಕೆ ಎನ್ ರಮೇಶ್ ರವರು ವಹಿಸಿದ್ದರು.
1.ಸಭೆಯಲ್ಲಿ 2020 21 ನೇ ಸಾಲಿನ ಕಾರ್ಯಚಟುವಟಿಕೆಗಳ ವರದಿ, ಜಮಾ ಖರ್ಚು ವಿವರ ಮಂಡಿಸಲಾಯಿತು.
2.ಸಭೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ತರಬೇತಿ ಶಿಬಿರಗಳ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.
3. 2021 22 ನೇ ಸಾಲಿನ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಮತ್ತು ಮುಂಗಡ ಆಯವ್ಯಯವನು ಮಂಡಸಿ ಅಂಗೀಕರಿಸಲಾಯಿತು.
4. ಇದೇ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಸ್ವರ್ಣ ಪದಕ ವಿಜೇತರಾದ ಶ್ರೀ ಟಿ ಕೆ ಪಣಿರಾಜ್ ಜಿಲ್ಲಾ ಕಾರ್ಯದರ್ಶಿ ರವರಿಗೆ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿಗಳು ತಾವು ಕೊವೀಡ್ ಸಮಯದಲ್ಲಿ ನೀಡಿದ ಸಂಸ್ಥೆಯ ಸಹಕಾರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಮುಂದಿನ ದಿನಗಳಲ್ಲಿ ಉತ್ತಮ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಭೆಯಲ್ಲಿ ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳು ತಾಲೂಕು ಸಂಸ್ಥೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಕೌನ್ಸಿಲ್ ಸಭೆಯ ಸದಸ್ಯರುಗಳು, ಮುಂತಾದವರು ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಿದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author