AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕೂಂದೂರು ಗ್ರಾ.ಪಂ ಅಧ್ಯಕ್ಷರಾಗಿ ಡಿ.ಬಿ ವಿಜೇಂದ್ರ ಆಯ್ಕೆ #avintvcom

1 min read
Featured Video Play Icon

ಕೂಂದೂರು ಗ್ರಾ.ಪಂ ಅಧ್ಯಕ್ಷರಾಗಿ ಡಿ.ಬಿ ವಿಜೇಂದ್ರ ಆಯ್ಕೆ

ಮೂಡಿಗೆರೆ: ತಾಲ್ಲೂಕಿನ ಕುಂದೂರು ಗ್ರಾಮ ಪಂಚಾಯಿತಿಯಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಡಿ.ಬಿ. ವಿಜೇಂದ್ರ ಹಾಗೂ ಉಪಾಧ್ಯಕ್ಷರಾಗಿ ರತಿನವೀನ್ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ. ವಿಜೇಂದ್ರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರತಿನವೀನ್ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯು ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಚುನಾವಣೆಯ ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಡಿ.ಬಿ. ವಿಜೇಂದ್ರ `ಗ್ರಾಮ ಪಂಚಾಯಿತಿಗಳ ಅನುದಾನದಲ್ಲಿ ಹೆಚ್ಚಿನ ನಿರೀಕ್ಷೆಗಳನ್ನು ಈಡೇರಿಸುವುದು ಕಷ್ಟ ಸಾಧ್ಯವಾಗುತ್ತದೆ. ಆದ್ಯತೆಯ ಅನುಸಾರ ಗ್ರಾಮದ ಅಭಿವೃದ್ಧಿಗೆ ಶ್ರಮಿಸಲಾಗುವುದು’ ಎಂದರು.

ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಮಾತನಾಡಿ, ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯ ಮೂಲ ಕೇಂದ್ರಗಳಾಗಿದ್ದು, ಗ್ರಾಮಗಳಿಗೆ ಅವಶ್ಯಕವಾದ ಕೆಲಸಗಳನ್ನು ಮಾಡುವ ಮೂಲಕ ಮಾದರಿ ಗ್ರಾಮಗಳನ್ನಾಗಿ ರೂಪಿಸಬೇಕು. ಚುನಾವಣೆಯವರೆಗೆ ಮಾತ್ರ ರಾಜಕೀಯ ನಡೆಸಬೇಕಿದ್ದು, ಚುನಾವಣೆಯ ಬಳಿಕ ಎಲ್ಲರೂ ಒಂದಾಗಿ ಸಾಗಿದರೆ ಮಾತ್ರ ಯಶಸ್ವಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.

ಮೀನುಗಾರಿಕೆ ಹಾಗೂ ಪಶುಸಂಗೋಪನಾ ವಿಶ್ವವಿದ್ಯಾಲಯದ ನಿರ್ದೇಶಕ ದೀಪಕ್ ದೊಡ್ಡಯ್ಯ ಮಾತನಾಡಿ, `ಸಾರ್ವಜನಿಕರಿಗೆ ಗರಿಷ್ಟ ಪ್ರಮಾಣದಲ್ಲಿ ಸೌಲಭ್ಯಗಳನ್ನು ಒದಗಿಸಬೇಕು. ಸವಲತ್ತುಗಳನ್ನು ನೀಡುವಾಗ ತಾರತಮ್ಯ ಮಾಡದೇ ಅರ್ಹರಿಗೆ ತಲುಪಸಿದರೆ ಮಾದರಿ ನಾಯಕನಾಗಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ರತಿನವೀನ್, ಸದಸ್ಯರಾದ ಸಂತೋಷ್ .ಸುನೀತ, ಜಯಂತಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಣಕಲ್ ಶ್ಯಾಮಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಅನುಕುಮಾರ್, ಉಪಾಧ್ಯಕ್ಷ ಸುಧೀರ್, ಸದಸ್ಯ ಧರ್ಮಪಾಲ್, ಲಕ್ಷ್ಮಣಗೌಡ, ಪಿಡಿಓ ವಾಸುದೇವ್ ಮುಂತಾದವರಿದ್ದರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author