75 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ *ರಕ್ತದಾನ* ಶಿಬಿರ ಕಾರ್ಯಕ್ರಮ ನಡೆಯಿತು
1 min read
ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ನೌಕರರ ಸಂಘದ ವತಿಯಿಂದ ಸಂಘದ ನೌಕರರ ಭವನದಲ್ಲಿ 75 ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ರಕ್ತದಾನ ಶಿಬಿರ ಕಾರ್ಯಕ್ರಮ ನಡೆಯಿತು.
ಈ ಸಮಾರಂಭದಲ್ಲಿ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳಾದ ಶ್ರೀ ಕೆ.ಎನ್ ರಮೇಶ್, ಉಪವಿಭಾಗಾಧಿಕಾರಿಗಳಾದ ಡಾ.ನಾಗರಾಜ್, ವೈದ್ಯರಾದ ಡಾ. ಮುರಳೀಧರ್ ಕಾರ್ಯಕ್ರಮ ಉದ್ಘಾಟಿಸಿ ಶುಭಕೋರಿದರು.
ನಂತರ ಚಿಕ್ಕಮಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಪ್ರಭುರವರು ಸಂಘದ ಸಮಾಜಮುಖಿ ಕಾರ್ಯಕ್ರಮವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀ ಓಂಕಾರ ಸ್ವಾಮಿ, ಕಾರ್ಯದರ್ಶಿ ಸತ್ಯನಾರಾಯಣ, ರಾಜ್ಯ ಪರಿಷತ್ ಸದಸ್ಯರಾದ ಪೂರ್ಣೇಶ್, ಖಜಾಂಚಿ ಚಂದ್ರಪ್ಪ, ಶಿವಕುಮಾರ್ ಕೆ ಆರ್,ಪದ್ಮರಾಜ್, ಮಲ್ಲಿಕಾರ್ಜುನ,ವಸಂತ್ ಕುಮಾರ್, ಮಹೇಶ್ವರಪ್ಪ ಮಂಜಪ್ಪ,ಸುಕೇಶ್ ಮತ್ತಿತರ ಪದಾಧಿಕಾರಿಗಳು ಹಾಜರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿದರು.
ಈ ಶಿಬಿರದಲ್ಲಿ 54 ನೌಕರ ಬಂಧುಗಳು ಹಾಗೂ ಸಹೃದಯಿ ಸಾರ್ವಜನಿಕರು ರಕ್ತದಾನ ಮಾಡಿ ಪ್ರೋತ್ಸಾಹಿಸಿದರು. ಮೂಡಿಗೆರೆ ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣಕುಮಾರ್ ರಕ್ತದಾನಿಗಳಿಗೆ ಸೇಬು ಹಣ್ಣುಗಳನ್ನು ನೀಡಿದರು.
ರಕ್ತದಾನ ಮಾಡಿದ ಎಲ್ಲ ಜೀವ ರಕ್ಷಕರಿಗೂ, ಸಂಫದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ತಾಲ್ಲೂಕು ಅಧ್ಯಕ್ಷರು ಮತ್ತು ಸ್ನೇಹಿತರೆಲ್ಲರಿಗೂ ಅನಂತ ಅನಂತ ಧನ್ಯವಾದಗಳನ್ನು ಅರ್ಪಿಸುತ್ತೇನೆ.
ದೇವೇಂದ್ರ
ಜಿಲ್ಲಾಧ್ಯಕ್ಷರು
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.
http://nisargacare.com/career/