ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಸಂಸ್ಥೆ ವತಿಯಿಂದ ಜಿಲ್ಲಾ ಸ್ಕೌಟ್ ಭವನದಲ್ಲಿ ಸದ್ಭಾವನ ದಿನಾಚರಣೆ
1 min read
*ಸದ್ಭಾವನ ದಿನಾಚರಣೆ*
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಹಾಗೂ ಸ್ಥಳೀಯ ಸಂಸ್ಥೆ ವತಿಯಿಂದ ಇಂದು ಜಿಲ್ಲಾ ಸ್ಕೌಟ್ ಭವನದಲ್ಲಿ ಸದ್ಭಾವನ ದಿನಾಚರಣೆಯನ್ನು ಆಚರಿಸಲಾಯಿತು.
ದಿವಂಗತ ರಾಜೀವ್ ಗಾಂಧಿ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತರಾದ ಶ್ರೀ ಎಂ ಎನ್ ಷಡಕ್ಷರಿ ರವರು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆಯುಕ್ತರು ಸ್ಕೌಟ್ ಶ್ರೀ ಎ ಎನ್ ಮಹೇಶ್, ಜಿಲ್ಲಾ ತರಬೇತಿ ಆಯುಕ್ತರು ಶ್ರೀಮತಿ ಸಂಧ್ಯಾರಾಣಿ , ಸ್ಥಳೀಯ ಸಂಸ್ಥೆ ಕಾರ್ಯದರ್ಶಿಯಾದ ಶ್ರೀ ರಾಘವೇಂದ್ರ, ಜಿಲ್ಲಾ ಸಂಘಟಕರು ಗಳಾದ ಕಿರಣ್ ಕುಮಾರ್ ನವೀನ್ ಕುಮಾರ್, ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್