लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

*ಮೂಡಿಗೆರೆ ಪದವಿ ಪೂರ್ವ ಕಾಲೆಜ್ ಪ್ರೌಢಶಾಲಾ ವಿಭಾಗದಲ್ಲಿ ತಳಿರು ತೋರಣ ಗಳಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಿಕ್ಷಕರು*

1 min read

*ಮೂಡಿಗೆರೆ ಪದವಿ ಪೂರ್ವ ಕಾಲೆಜ್ ಪ್ರೌಢಶಾಲಾ ವಿಭಾಗದಲ್ಲಿ ತಳಿರು ತೋರಣ ಗಳಿಂದ ವಿದ್ಯಾರ್ಥಿಗಳನ್ನು ಸ್ವಾಗತಿಸಿದ ಶಿಕ್ಷಕರು*

 

ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಮೂಡಿಗೆರೆ ಇಲ್ಲಿ ದಿನಾಂಕ 30.08.2021ರಂದು 9ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಹೇಮಂತ್ ರಾಜ್ ರವರು ಹಾಜರಿದ್ದು ಉದ್ಘಾಟನೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀ ರವೀಶ್ ರವರು , ಶಾಲೆಯ ಸಹ ಶಿಕ್ಷಕರು ಸಿಬ್ಬಂದಿ ವರ್ಗ , ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು. ಶಾಲೆಯನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಹೂ ನೀಡುವುದರ ಮೂಲಕ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ಆರೋಗ್ಯ ಇಲಾಖೆ ನೀಡಿದ್ದ ಎಸ್.ಓ.ಪಿ . ಅನುಸಾರ ಶಾಲೆಯಲ್ಲಿ ಸರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳೆಲ್ಲರೂ ಮಾಸ್ಕ್ ಧರಿಸಿ , ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಕೋರೋನ ಮಹಾಮಾರಿಯ ಹಿನ್ನಲೆಯಲ್ಲಿ ಎರಡು ತಿಂಗಳು ನಂತರ ಶಾಲೆಯನ್ನು ತೆರೆಯಲು ಸರ್ಕಾರ ಅನುಮತಿ ನೀಡಿದ್ದರಿಂದ ವಿದ್ಯಾರ್ಥಿಗಳು ಮತ್ತೆ ಶಾಲೆಯ ತರಗತಿಯ ಅನುಭವವನ್ನು ಪಡೆಯುವಂತಾಯಿತು. ಈ ಮೊದಲು ವಿದ್ಯಾರ್ಥಿಗಳು ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸಂವೇದ ತರಗತಿಗಳು ಮತ್ತು ಶಿಕ್ಷಕರು ಮಾಡುತ್ತಿದ್ದ ಆನ್ಲೈನ್ ತರಗತಿಗಳ ಮೇಲೆ ಅವಲಂಬಿತರಾಗಿದ್ದರು. ಅದರಲ್ಲೂ ಸೂಕ್ತ ಸೌಲಭ್ಯಗಳಿದ್ದ ವಿದ್ಯಾರ್ಥಿಗಳು ಮಾತ್ರ ಇದರ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದರು. ಈಗ ಭೌತಿಕ ತರಗತಿಗಳು ಪ್ರಾರಂಭವಾಗಿರುವುದರಿಂದ ಎಲ್ಲಾ ವಿದ್ಯಾರ್ಥಿಗಳಿಗೂ ಅನೂಕೂಲವಾಗಿದೆ.
ದಿನಾಂಕ:30-08-2021ನೇ ಸೋಮವಾರ ಗ್ಲೋರಿಯಸ್ ನೇಚರ್ ಎಂಟರ್ಟೈನರ್ ಪೇಜ್ ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮವನ್ನು “ಹಸಿರೆ ಉಸಿರು”ಎಂಬ ಶೀರ್ಷಿಕೆಯ ಅಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರೌಢ ಶಾಲ ವಿಭಾಗ ಮೂಡಿಗೆರೆ ಇಲ್ಲಿ ಆಯೋಜಿಸಲಾಗಿತ್ತು ಈ ಒಂದು ಕಾರ್ಯಕ್ರವನ್ನು ತಾಲ್ಲೂಕು ಕ.ಸಾ.ಪ ನಿಕಟ ಪೂರ್ವ ಅಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಪ್ರಸ್ತುತ ದಿನಮಾನಗಳಲ್ಲಿ ಪರಿಸರದ ಮೇಲೆ ಕಾಳಜಿ ಇಲ್ಲದಿರುವ ಈ ಸಂದರ್ಭದಲ್ಲಿ ಸಂಗೀತಕ್ಕೆ ಮಾತ್ರ ಸೀಮಿತವಾಗದೆ ಇಂತಹ ಕೆಲಸಕ್ಕೆ ಮುಂದಾಗಿರುವುದು ಶ್ಲಾಘನೀಯ ಈ ಕಾರ್ಯಕ್ಕೆ ಎಲ್ಲ ಸಾರ್ವಜನಿಕರು ಕೈ ಜೋಡಿಸಬೇಕು ಎಂದರು. ಇದೆ ಸಂದರ್ಭದಲ್ಲಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹೇಮಂತ್ ರಾಜ್ ಮಾತನಾಡಿ ಪ್ರತಿಯೊಬ್ಬರು ಗಿಡ ನೆಡುವ ಈ ಕಾರ್ಯಕ್ರಮಕ್ಕೆ ನೆರವಾಗಬೇಕು.
ಮುಂದಿನ ದಿನಗಳಲ್ಲಿ ಪ್ರಾಕೃತಿಕ ವಿಕೋಪಗಳಿಗೆ ದೊಡ್ಡ ನಷ್ಟ ಮಾನವ ಸಮಾಜ ಎದುರಿಸುವ ದಿನಗಳು ದೂರವಿಲ್ಲ ಎಂದರು. ಶಾಲೆಯ ಮುಖ್ಯ ಶಿಕ್ಷಕ ರವೀಶ್,ತಾಲೂಕ್ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ಬಕ್ಕಿ ಮಂಜುನಾಥ್,
ಶಿಕ್ಷಕ ಜಯಪಾಲ್,
ಯುವ ಸಾಹಿತಿ ಹೆಸಗಲ್ ವೆಂಕಟೇಶ್,
ಗ್ಲೋರಿಯಸ್ ನೇಚರ್ ಎಂಟರ್ಟೈನರ್ ಪೇಜ್ ನ
ಸುಂದರ್ ಮುಗುಳಿ,
ಗಿರೀಶ್ ಪಣಕಜೆ, ಅಂಬಾವತಿ ಬಿಳಗುಳ,
ಗಾಯಕ ಉಮೇಶ್,
ಶಿವಕುಮಾರ್,ಅವಿನಾಶ್,ಶಿಕ್ಷಕ ವೈ ಎನ್ ಪರಮೇಶ್,ತೇಜುಮೂರ್ತಿ,ಮುಂತಾದವರು ಇದ್ದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು..

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Career | job

Navachaitanya Old Age Home

About Author