ತೇಜಸ್ವಿ ಜನ್ಮದಿನ ಹಿನ್ನಲೆ
1 min read
ತೇಜಸ್ವಿ ಜನ್ಮದಿನ ಹಿನ್ನಲೆ
ಸೆ.೮ಕ್ಕೆ ತೇಜಸ್ವಿ ಸಾಹಿತ್ಯ ವಿಚಾರ ಮಂಥನ
ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ಆಯೋಜನೆ
ಚಿಕ್ಕಮಗಳೂರು ಜಿಲ್ಲೆ.
ಮೂಡಿಗೆರೆ ತಾಲೂಕಿನ,
ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಚಿಕ್ಕಮಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ,
ತೇಜಸ್ವಿ ಅವರ ಜನ್ಮದಿನದ ಪ್ರಯುಕ್ತ ಸೆಪ್ಟೆಂಬರ್ ೮ ರಂದು ತೇಜಸ್ವಿ ಸಾಹಿತ್ಯ ವಿಚಾರ ಮಂಥನ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ ೧೧-೩೦ಕ್ಕೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ವರ್ತಮಾನದಲ್ಲಿ ತೇಜಸ್ವಿ ವಿಚಾರಧಾರೆ ವಿಷಯದ ಕುರಿತು ಚಿಕ್ಕಮಗಳೂರಿನ ನಿವೃತ್ತ ಉಪನ್ಯಾಸಕರಾದ ಬಿ ತಿಪ್ಪೆರುದ್ರಪ್ಪ ಅವರು ಉಪನ್ಯಾಸ ನೀಡಲಿದ್ದಾರೆ. ಹಾಸನದ ಅಬಚೂರಿನ ಮಿತ್ರವೃಂದ ಪ್ರಕಾಶನದ ತೇಜಸ್ವಿಯವರ ನೆನಪಿನ ಕಥಾಸ್ಪರ್ಧೆ ೨೦೨೧ ರ ತೆರೆದ ಅಂಚೆ ಎಂಬ ಕಥಾ ಸಂಕಲನ ಬಿಡುಗಡೆಯಾಗಲಿದೆ.
ಆ ದಿನ ಸಂಜೆ ತೇಜಸ್ವಿ ಓದು ಕಾರ್ಯಕ್ರಮದಲ್ಲಿ ತೇಜಸ್ವಿ ಅವರ ಪಾಕ ಕ್ರಾಂತಿ ಮತ್ತು ಇತರ ಕಥೆಗಳು ಕೃತಿಯ ಬಗ್ಗೆ ಸಾಹಿತಿಗಳಾದ ರೇಖಾ ನಾಗರಾಜರಾವ್ ಅವರು ಮಾತನಾಡಲಿದ್ದಾರೆ. ಕೋವಿಡ್ ಹಿನ್ನಲೆಯಲ್ಲಿ ಈ ಎಲ್ಲಾ ಕಾರ್ಯಕ್ರಮಗಳು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರವಾಗಲಿದ್ದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಫೇಸ್ಬುಕ್ನ ಕೆಪಿಪಿಟ್ರಸ್ಟ್ ಅಧಿಕೃತ ಪೇಜ್ನಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೮೯೭೧೯೨೦೮೩೯, ೯೬೬೩೦೯೮೮೭೩ ಗೆ ಸಂಪರ್ಕಿಸಬಹುದಾಗಿದೆ.
ವರದಿ
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.