लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
22/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಬೆಳಗಾವಿ ಜಿಲ್ಲೆ ಅಥಣಿ ಮಿನಿ ವಿಧಾನಸಭಾ ತಶಿಲ್ದಾರ್ ಕಚೇರಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ

1 min read
Featured Video Play Icon

ಬೆಳಗಾವಿ ಜಿಲ್ಲೆ ಅಥಣಿ ತಾಲೂಕು ಮಿನಿ ವಿಧಾನಸಭಾ ತಶಿಲ್ದಾರ್ ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ನೀತಿ ಖಂಡಿಸಿ ಹಾಗೂ ಅಥಣಿಯಲ್ಲಿ ಮಳೆ ಬಂದರು ಸಹ ರೈತರು ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ತಮ್ಮ ಹೋರಾಟವನ್ನು ನಡೆಸಿ ಅಥಣಿ ತಹಶೀಲ್ದಾರ ದುಂಡಪ್ಪಾ ಕೋಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಜಿಲ್ಲೆಯ ಅಥಣಿ ತಾಲೂಕಿನ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ರೈತರಿಂದ ಬಿರಕೋಲು ಮತ್ತು ಮಹಿಳಾ ರೈತರಿಂದ ತಲೆ ಮೇಲೆ ಸೌದೆ ಹೋತ್ತು ಪ್ರತಿಭಟನೆ ನಡೆಸಿದರು.

 

..
ನಂತರ ರೈತ ಮುಖಂಡ ಮಹಾದೇವ ಮಡಿವಾಳ ಮಾತನಾಡಿ ೧೦ ತಿಂಗಳಿನಿಂದ ೩ ಕೃಷಿ ಕಾಯಿದೆಗಳನ್ನು ತಿದ್ದುಪಡೆ ಮಾಡಿದ್ದರಿಂದ, ಇಂದು ನಾವು ಭಾರತ ಬಂದ್ ಮಾಡುವ ಮೂಲಕ ಕೃಷಿ ಕಾಯಿದೆಗಳನ್ನು ಹಿಂಪಡೆಯುವಂತೆ ರವಾನೆ ಮಾಡಿದ್ದೇವೆ. ಕೇಂದ್ರ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ರೈತರ ಪರ ನಿಲ್ಲಲಿ ಎನ್ನುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಅಥಣಿ | ರೈತ ವಿರೋಧಿ ಕೃಷಿ ಕಾಯಿದೆ ಹಿಂಪಡೆಯುವಂತೆ ಆಗ್ರಹಿಸಿ ಅನ್ನದಾತರ ಪ್ರತಿಭಟನೆ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ರಾಜ್ಯದ ರಾಜ್ಯದ ಮುಖಂಡರು ಪದಾಧಿಕಾರಿಗಳು ಸದಸ್ಯರು ಎಲ್ಲಾ ಜಿಲ್ಲೆಯ ತಾಲೂಕು ರೈತರು ಆಗಮಿಸಿದ್ದರು

Career | job

Navachaitanya Old Age Home

About Author