*ಶ್ರದ್ದಾಂಜಲಿ ಕಾರ್ಯಕ್ರಮ*
1 min read
*ಶ್ರದ್ದಾಂಜಲಿ ಕಾರ್ಯಕ್ರಮ*
ಕನ್ನಡ ನಾಡು ಕಂಡ ಅಪರೂಪದ ಸಾಹಿತಿಗಳಲ್ಲಿ ಚಂದ್ರಶೇಖರ ಪಾಟೀಲರು ಒಬ್ಬರು. ಚಂಪಾ ಎಂದೇ ಹೆಸರಾದ ಚಂದ್ರಶೇಖರ ಪಾಟೀಲರು ಕನ್ನಡ ಕನ್ನಡ, ಬರ್ರೀ ನಮ್ಮ ಸಂಗಡ, ಎನ್ನತ್ತಲೇ ಕನ್ನಡ ನಾಡಿನ ಉದ್ದಗಲಕ್ಕೂ ಕನ್ನಡದ ಕಂಪನ್ನು ಹರಡಿಸಿದರು. ರಾಜ್ಯ ಕನ್ನಡ
ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ,ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ವಿವಿಧ ಪದವಿಗಳನ್ನು ಅಲಂಕರಿಸಿದರು ಚಂಪಾರವರು ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಸೂರಿ ಶ್ರೀನಿವಾಸ್ ಅವರು ತಿಳಿಸಿದರು. ಈ ದಿನ ಕಡೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಭವನದಲ್ಲಿ ಚಂದ್ರಶೇಖರ ಪಾಟೀಲರ ಸಂತಾಪ ಸೂಚಕ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿಂಗಟಗೆರೆ ಸಿದ್ಧಪ್ಪ, ಗೌರವ ಸಲಹೆಗಾರರಾದ
ಆರ್.ಜಿ.ಕೃಷ್ಣಸ್ವಾಮಿ, ತಾಲ್ಲೂಕು ಗೌರವ ಕೋಶಾಧ್ಯಕ್ಷರಾದ ವಡೇರಹಳ್ಳಿ ಅಶೋಕ್, ಗೌರವ ಕಾರ್ಯದರ್ಶಿಗಳಾದ ಕುಪ್ಪಾಳು ಶಾಂತಮೂರ್ತಿ, ನಂಜುಂಡಸ್ವಾಮಿ, ಜಿಲ್ಲಾ ಕ.ಸಾ.ಪ.ಕೋಶಾಧ್ಯಕ್ಷರಾದ ಬಿ.ಪ್ರಕಾಶ್, ಕಡೂರು ನಗರ ಘಟಕದ ಅಧ್ಯಕ್ಷರಾದ ಹೊ.ರಾ.ಕೃಷ್ಣಕುಮಾರ್ ಮುಂತಾದವರು ಉಪಸ್ಥಿತರಿದ್ದು ಚಂಪಾರವರ ಆತ್ಮಕ್ಕೆ ಭಗವಂತ ಚಿರಶಾಂತಿ ನೀಡಲೆಂದು ಶ್ರದ್ಧಾಂಜಲಿಯನ್ನು ಸಮರ್ಪಿಸಲಾಯಿತು.
ವರದಿ.
ಮಗ್ಗಲಮಕ್ಕಿಗಣೇಶ್
ಬ್ಯೂರೋ ನ್ಯೂಸ್.
Fresher Jobs | jobs hiring | job openings Udyog mela | jobs employment | udyog kendra – Nisarga Care
Good facilities and Best treatment Center Bangalore |