ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಗೊಂಡ ತಿಪ್ಪೇರುದ್ರಪ್ಪರಿಗೆ ಸ್ವಾಗತ…..
1 min read
ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಗೊಂಡ ತಿಪ್ಪೇರುದ್ರಪ್ಪರಿಗೆ ಸ್ವಾಗತ
ಚಿಕ್ಕಮಗಳೂರು: ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲಿರುವ ಆರನೇ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಗೊಂಡ ಸಾಹಿತಿ, ಹಿರಿಯ ಪತ್ರಕರ್ತ ಬಿ.ತಿಪ್ಪೇರುದ್ರಪ್ಪ ಅವರಿಗೆ ಸ್ವಗೃ ಹದಲ್ಲಿ ಕಸಾಪ ಮುಖಂಡರುಗಳು ಶನಿವಾರ ಸಂಜೆ ಕಸಾಪ ತಾಲ್ಲೂಕು ಘಟಕದಿಂದ ಭೇಟಿ ಮಾಡಿ ಸಮ್ಮೇ ಳನಕ್ಕೆ ಅಧಿಕೃತವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಸಾಪ ಗೌರವಾಧ್ಯಕ್ಷ, ಸಿಡಿಎ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಎಸ್.ಎಸ್. ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ಲೋಕೇಶಪ್ಪ, ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ವಿಶ್ವನಾಥ್, ನಗರಾಧ್ಯಕ್ಷೆ ರೂಪಾನಾಯ್ಕ, ಕಸಾಪ ಸದಸ್ಯರಾದ ಬಿಸಲೇಹಳ್ಳಿ ಸೋಮಶೇಖರ್, ರಮೇಶ್ ವೀಣಾ ಮಲ್ಲಿಕಾರ್ಜುನ್, ಎನ್.ಸುರೇಶ್ ನಾರಿನಿಂಗಜ್ಜಿ, ಮುಂತಾದವರು ಉಪಸ್ಥಿತರಿದ್ದರು.

