लाइव कैलेंडर

August 2026
M T W T F S S
 12
3456789
10111213141516
17181920212223
24252627282930
31  
24/08/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ರಂಥಪಾಲಕರ ದಿನಾಚರಣೆ ಮತ್ತು ನಿವೃತ್ತರಾದ ಗ್ರಂಥಪಾಲಕರಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಪಿ.ಡಿ.ಒ.ಸುಮಾ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಂಥಾಲಯದ ಮಹತ್ವ ಹಾಗೂ ಡಾ.ಎಸ್.ಆರ್. ರಂಗನಾಥ್ ರವರ ಪರಿಚಯವನ್ನು ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಮಾತನಾಡಿ, ತಾಲ್ಲೂಕಿನಾದ್ಯಂತ ಅರಿವು ಕೇಂದ್ರಗಳಲ್ಲಿ ಬೇಸಿಗೆ ಶಿಬಿರವನ್ನು ಅಚ್ಚುಕಟ್ಟಾಗಿ ಗುಣಮಟ್ಟದಲ್ಲಿ ನಡೆಸಿ ಕೊಟ್ಟಿದ್ದು,ಶಿಬಿರವು ಯಶಸ್ವಿಯಾಗಿದೆ.ಮಕ್ಕಳು ಮೊಬೈಲ್ ನಲ್ಲಿ ಓದುವುದಕ್ಕಿಂತ ಪುಸ್ತಕ ನೋಡಿ ಓದಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಹಾಯಕ ನಿರ್ದೇಶಕರಾದ ಪರಮೇಶ್,ಅಶೋಕ್, ಪಿಡಿಒ ಸಂಘದ ಕಾರ್ಯದರ್ಶಿ ರಾಜಕುಮಾರ್, ಗ್ರಂಥಪಾಲಕರ ಸಂಘದ ಜಿಲ್ಲಾಧ್ಯಕ್ಷ ಪರಮೇಶ್,ಗ್ರಂಥಪಾಲಕರ ಸಂಘದ ತಾಲ್ಲೂಕು ಅಧ್ಯಕ್ಷ,ಅರುಣ್ ಕುಮಾರ್,ಗೌರವಾಧ್ಯಕ್ಷ ಮಂಜಯ್ಯ,ಗ್ರಂಥ ಪಾಲಕರಾದ ಸವಿತಾ,ಪ್ರಕಾಶ್ ಬೆಳವಾಡಿ,ರಾಧಾ ಅಜ್ಜಯ್ಯ ಹಾಗೂ ಮತ್ತಿತರರಿದ್ದರು.

✍ಬರಹ ಕೃಪೆ.✍

ಸಿದ್ದಿಕ್ ಚಕ್ಕಮಕ್ಕಿ.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಸ್ಥಾನಿಕ ಸಂಪಾದಕರು.

ನ್ಯೂಸ್ ಬ್ಯೂರೋ,ಅವಿನ್ ಟಿವಿ.

About Author

More Stories

Leave a Reply

Your email address will not be published. Required fields are marked *

You may have missed