AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಆಮ್ ಆದ್ಮಿ ಪಕ್ಷ 8ನೇ ಸಂಸ್ಥಾಪನಾ ದಿನಾಚರಣೆ ಕರ್ನಾಟಕದ ಹೆಮ್ಮೆಯ ಕೊರೋನಾ ಯೋದರಿಗೆ ಸನ್ಮಾನ ಸಮಾರಂಭ #avintvcom

1 min read
Featured Video Play Icon

ವರ್ಷ ಎಂಟು ಸಾಧನೆ ನೂರೆಂಟು ಘೋಷಣೆಯೊಂದಿಗೆ ಇದೇ 26 ರಂದು ಆಮ್ ಆದ್ಮಿ ಪಕ್ಷ 8ನೇ ಸಂಸ್ಥಾಪನಾ ದಿನಾಚರಣೆ ಕರ್ನಾಟಕದ ಹೆಮ್ಮೆಯ ಕೊರೋನಾ ಯೋದರಿಗೆ ಸನ್ಮಾನ ಸಮಾರಂಭ
ಮಹಾತ್ಮ ಗಾಂಧೀಜಿ ಅವರ ಸ್ವರಾಜ್ಯ ಕಲ್ಪನೆಯ ಮೇಲೆ ಸ್ಥಾಪಿತವಾದ ಆಮ್ ಆದ್ಮಿ ಪಕ್ಷ ಇಂದು ದೇಶದಲ್ಲೇ ವೇಗವಾಗಿ ಬೆಳೆಯುತ್ತಿರುವ ರಾಜಕೀಯ ಪಕ್ಷವಾಗಿದ್ದು ಇದೇ ಗುರುವಾರ (26.11.2020) ರಂದು ಸಂಜೆ 4 ಗಂಟೆಗೆ ಹಲಸೂರು ಕೆರೆ ಬಳಿಯ ಆರ್ಬಿಎನ್ಎಂಎಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾಹಿತಿ ನೀಡಿದರು.
ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ವರ್ಷ ಎಂಟು ಸಾಧನೆ ನೂರೆಂಟು ಎನ್ನುವ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ವೇಳೆ ತಮ್ಮ ಪ್ರಾಣದ ಹಂಗನ್ನು ತೊರೆದು ಲಾಕ್ಡೌನ್ ವೇಳೆ ದುಡಿದ ಕರ್ನಾಟಕದ ಕೊರೋನಾ ಯೋದರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಇಡೀ ಭಾರತದ ರಾಜಕೀಯ ಇತಿಹಾಸದಲ್ಲಿ ಇಷ್ಟು ವೇಗವಾಗಿ ಬೆಳೆದ ರಾಜಕೀಯ ಪಕ್ಷ ಇನ್ನೊಂದಿಲ್ಲ ಕೇವಲ ಎಂಟು ವರ್ಷದಲ್ಲಿ ನೂರೆಂಟು ಸಾಧನೆ ಮಾಡಿದ ಆಮ್ ಆದ್ಮಿ ಪಕ್ಷ ಭಾರತದ 130 ಕೋಟಿ ಜನರಲ್ಲಿ ಬದಲಾವಣೆಯ ಭರವಸೆ ಮೂಡಿಸಿದೆ ಎಂದರು.
ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಅವರು ಮಾತನಾಡಿ, ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಗದ್ದುಗೆಯನ್ನು 3 ಬಾರಿ ಏರಿದ್ದು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದೆ. ದೆಹಲಿಯ ಜನರ ಜೀವನ ಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮಾಡಿದ ಕ್ರಾಂತಿಕಾರಕ ಬದಲಾವಣೆಗಳಿಂದ ಅರವಿಂದ ಕೇಜ್ರಿವಾಲ್ ಅವರ ನೇತೃತ್ವದ ಸರ್ಕಾರ ವಿಶ್ವದರ್ಜೆಯ ಸವಲತ್ತುಗಳನ್ನು ತನ್ನ ಜನರಿಗೆ ಪರಿಚಯಿಸಿದೆ. ಈ ಸಾಧನೆಗಳ ಕುರಿತು ತಯಾರಿಸಿರುವ “ಇನ್ಸಿಗ್ನಿಫಿಕೆಂಟ್ ಮ್ಯಾನ್” ಎನ್ನುವ ಚಲನಚಿತ್ರ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮ ನಡೆಯುವ ಸ್ಥಳ: ಆರ್.ಬಿ.ಎನ್.ಎಂ.ಎಸ್ ಪ್ರಥಮ ದರ್ಜೆ ಕಾಲೇಜು ಸಭಾಂಗಣ, ಹಲಸೂರು ಕೆರೆ ಹತ್ತಿರ, ಬೆಂಗಳೂರು
ದಿನಾಂಕ: 26.11.2020 ಗುರುವಾರ ಸಮಯ: ಸಂಜೆ 5.30
ಸಾಂಸ್ಕೃತಿಕ ಕಾರ್ಯಕ್ರಮಗಳು : ಇನ್ಸಿಗ್ನಿಫಿಕೆಂಟ್ ಮ್ಯಾನ್ ಚಲನಚಿತ್ರ ಪ್ರದರ್ಶನ ಮತ್ತು ಏಷ್ಯಾದ ಬಲಶಾಲಿ ವ್ಯಕ್ತಿ ಮನೋಜ್ ಚೋಪ್ರಾ ಅವರಿಂದ ಶಕ್ತಿ ಪ್ರದರ್ಶನ

About Author